Sunday, March 26, 2023
Google search engine
HomeUncategorizedBIG NEWS: ಪ್ರಧಾನಿ ಮೋದಿ ಆಗಮನ ಹಿನ್ನೆಲೆ; ಮೈಸೂರು-ಬೆಂಗಳೂರು ಮಾರ್ಗ ಬದಲಾವಣೆ

BIG NEWS: ಪ್ರಧಾನಿ ಮೋದಿ ಆಗಮನ ಹಿನ್ನೆಲೆ; ಮೈಸೂರು-ಬೆಂಗಳೂರು ಮಾರ್ಗ ಬದಲಾವಣೆ

BIG NEWS: ಪ್ರಧಾನಿ ಮೋದಿ ಆಗಮನ ಹಿನ್ನೆಲೆ; ಮೈಸೂರು-ಬೆಂಗಳೂರು ಮಾರ್ಗ ಬದಲಾವಣೆ

ಬೆಂಗಳೂರು: ಮಾರ್ಚ್ 12ರಂದು ರಾಜ್ಯಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು-ಮೈಸೂರು ಹೈವೆ ಲೋಕಾರ್ಪಣೆ ಮಾಡಲಿದ್ದು, ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಬೃಹತ್ ಸಮಾವೇಶ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.

ಮೈಸೂರಿನಿಂದ ಬೆಂಗಳೂರಿಗೆ ಸಂಚರಿಸುವ ವಾಹನಗಳು ಬನ್ನೂರು, ಕಿರುಗಾವಲು, ಮಳವಳ್ಳಿ, ಹಲಗೂರು, ಕನಕಪುರದಿಂದ ಸಾಗಿ ಬೆಂಗಳೂರು ತಲುಪಬಹುದಾಗಿದೆ. ಮೈಸೂರಿನಿಂದ ಮಂಡ್ಯ ಮೂಲಕ ತುಮಕೂರು ಕಡೆ ಹೋಗುವವರು ಮೈಸೂರಿನಿಂದ ಶ್ರೀರಂಗಪಟ್ಟಣ, ಪಾಂಡವಪುರ, ನಾಗಮಂಗಲ, ಬೆಳ್ಳೂರು ಕ್ರಾಸ್ ಮೂಲಕ ತುಮಕೂರಿಗೆ ಸಾಗಬಹುದಾಗಿದೆ.

ಬೆಂಗಳೂರಿನಿಂದ ಮೈಸೂರಿಗೆ ಹೋಗುವ ವಾಹನಗಳು ಚೆನ್ನಪಟ್ಟಣ, ಹಲಗೂರು, ಮಳವಳ್ಳಿ, ಕಿರುಗಾವಲು, ಬನ್ನೂರು ಮೂಲಕ ಮೈಸೂರಿಗೆ ತೆರಳಬಹುದು. ಬೆಂಗಳೂರಿನಿಂದ ಮಲೈಮಹದೇಶ್ವರ ಬೆಟ್ಟಕ್ಕೆ ತೆರಳುವ ವಾಹನಗಳು ಚೆನ್ನಪಟ್ಟಣ, ಹಲಗೂರು, ಮಳವಳ್ಳಿ ಮೂಲಕ ಕೊಳ್ಳೆಗಾಲ ಮೂಲಕ ತೆರಳಬಹುದು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments